ವರದಿ ರಾಣಿ ಪ್ರಸನ್ನಕುಮಾರ್
ದಿನಾಂಕ 12.09.2024 ರಂದು ಸಕಲೇಶಪುರ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಡೇ ಹಳ್ಳಿಯಲ್ಲಿ, ಬೆಳಗೋಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ನೆರವೇರಿಸಲಾಯಿತು. ಪಾರಿವಾಳಗಳನ್ನು ಹಾರಿ ಬಿಡುವುದರ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ ಬಹುಮಾನ ಮಕ್ಕಳಿಗೆ ಮತ್ತು ಪೋಷಕರಿಗೆ ಊಟ ವ್ಯವಸ್ಥೆಯನ್ನು ತುಂಬಾ ಅಚ್ಚುಕಟ್ಟಾಗಿ ವ್ಯವಸ್ಥಾಪಕ ಶಾಲೆಯವರು ನೆರವೇರಿಸುತ್ತಾರೆ.
ಈ ಕಾರ್ಯಕ್ರಮದಲ್ಲಿ ಬೆಳಗೋಡು ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳು 18 ಬಹುಮಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.


