ಭಾರತೀಯ ಜನತಾ ಪಾರ್ಟಿ ಸಕಲೇಶಪುರ ಮಂಡಲದ ಯುವ ಮೋರ್ಚಾದ ಅಧ್ಯಕ್ಷರಾಗಿ ನಿಖಿಲ್ ಹಲಸುಲಿಗೆ ಆಯ್ಕೆ.
ಕಳೆದ ಅವಧಿಯಲ್ಲಿ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಜವಾಬ್ದಾರಿಯನ್ನು ನಿಭಾಯಿಸಿದ್ದು ಈಗ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತಸ ತಂದಿದೆ.
ಭಾರತೀಯ ಜನತಾ ಪಾರ್ಟಿಗೆ ಅನಂತ ಧನ್ಯವಾದಗಳನ್ನು ಹೇಳುತ್ತೇನೆ. ನನ್ನನ್ನು ನೇಮಕ ಮಾಡುವುದಕ್ಕೆ ಸಹಕರಿಸಿದ ಸಕಲೇಶಪುರ-ಆಲೂರು-ಕಟ್ಟಾಯ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸಿಮೆಂಟ್ ಮಂಜಣ್ಣ, ಜಿಲ್ಲಾಧ್ಯಕ್ಷರಾದ ಸಿದ್ದೇಶ್ ನಾಗೇಂದ್ರಣ್ಣ ಹಾಗೂ ತಾಲೂಕು ಅಧ್ಯಕ್ಷರಾದ ವಳಲಹಳ್ಳಿ ಅಶ್ವಥ್ ಅಣ್ಣ ಹಾಗು ಮಾಜಿ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಮತ್ತು ಭಾರತೀಯ ಜನತಾ ಪಾರ್ಟಿಯ ಎಲ್ಲಾ ಮುಖಂಡರಿಗೂ, ಕಾರ್ಯಕರ್ತರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ನನಗೆ ನೀಡಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಸಮರ್ಥವಾಗಿ ನಿರ್ವಹಿಸಲು ಎಲ್ಲರ ಸಹಕಾರ, ಮಾರ್ಗದರ್ಶನ ಬಹು ಮುಖ್ಯವಾಗಿದ್ದು ಈ ನಿಟ್ಟಿನಲ್ಲಿ ಎಲ್ಲರ ಆಶೀರ್ವಾದ ಕೋರುತ್ತಾ ನನಗೆ ಅಭಿನಂದಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಈ ಮೂಲಕ ತಿಳಿಸುತ್ತೇನೆ.
*ನಿಖಿಲ್ ಹೆಚ್ ಎಂ*
*ಹಲಸುಲಿಗೆ*
previous post
next post
