Blog

ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ

ವರದಿ ರಾಣಿ ಪ್ರಸನ್ನ

ಸಕಲೇಶಪುರ  ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ (ರಿ.) ಸಕಲೇಶಪುರ ತಾಲ್ಲೂಕು ಘಟಕ ವತಿಯಿಂದ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ತಾಲ್ಲೂಕು ಕಚೇರಿ ಮುಂಭಾಗ ಕಪ್ಪು ಬಟ್ಟೆ ಧರಿಸಿ ಮೌನ ಪ್ರತಿಭಟನೆಯ ಅನಿರ್ದಿಷ್ಟವಾದಿ ಮುಷ್ಕರವನ್ನು ಬೆಳಗ್ಗೆಯಿಂದ ಸಂಜೆಯವರೆಗೆ  ಹಮ್ಮಿಕೊಂಡಿದ್ದರು

ತಾಲ್ಲೂಕು ದಂಡಾಧಿಕಾರಿ ಮೇಘನಾ ಹಾಗೂ ಉಪವಿಭಾಗಾಧಿಕಾರಿ ಶೃತಿ ರವರಿಗೆ ತಮ್ಮ ಬೇಡಿಕೆಗಳ ಮನವಿ ಪತ್ರವನ್ನು ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಮುಂದೆಯೂ ಪ್ರತಿಭಟನೆ ಮುಂದುವರೆಯಲಿದೆ ಎಂದು ತಿಳಿಸಿದರು  ಎಲ್ಲಿಯವರೆಗೂ  ನಮ್ಮ ಬೇಡಿಕೆಗಳು ಈಡೇರುವುದಿಲ್ಲ ಅಲ್ಲಿಯವರೆಗೂ ಮುಂದುವರೆಯುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಸಿದ್ದಲಿಂಗೇಶ್,ಕಾರ್ಯದರ್ಶಿಯಾದ ವಂದಿತಾ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗ್ರಾಮ ಆಡಳಿತ ಅಧಿಕಾರಿಗಳು ಇದ್ದರು.

Related posts

ಜಾತಿ ನಿಂದನೆ – ಕೊಲೆ ಬೆದರಿಕೆ

Bimba Prakashana

ವಳಲಹಳ್ಳಿಯಲ್ಲಿ ಶ್ರೀ ಗುರು ಶನೈಶ್ಚರ ಪೂಜೆ

Bimba Prakashana

ಹೆತ್ತೂರು ಸರಕಾರಿ ಪದವಿ ಪೂರ್ವ ಕಾಲೇಜು ಚಾಂಪಿಯನ್

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More