ತ್ವರಿತವಾಗಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಶಾಸಕರ ಸೂಚನೆ.
ಆಲೂರು:ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಲೂರಿನ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಆಲೂರು ತಾಲೂಕು ಮಟ್ಟದ ಪರಿಶಿಷ್ಟ ಜಾತಿ / ವರ್ಗಗಳ ಜಾಗೃತಿ ಮತ್ತು ಹಿತ ರಕ್ಷಣಾ ಸಮಿತಿಯ ಕುಂದು ಕೊರತೆ ಸಭೆಯನ್ನು ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಉದ್ಘಾಟಿಸಿದರು.
ನಂತರ ಸಮಸ್ಯೆಗಳನ್ನು ಆಲಿಸಿ ಸಮಾಜದ ಮುಖಂಡರುಗಳಿಂದ ಕುಂದು ಕೊರತೆಗಳ ಬಗ್ಗೆ ಮಾಹಿತಿ ಪಡೆದು,ಅದರ ಪರಿಹಾರಗಳ ಕುರಿತು ಸಲಹೆ ಪಡೆಯಲಾಯಿತು.
ಸಮಾಜದ ಕುಂದು ಕೊರತೆಗಳ ಕುರಿತು ಮುಂದಿನ ಕುಂದು ಕೊರತೆಗಳನ್ನು ಪರಿಹರಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.ಪಟ್ಟಿಯಲ್ಲಿ ಇರುವಂತಹ ಸಮಸ್ಯೆಗಳು ಪಟ್ಟಿಯಲ್ಲಿಯೇ ಉಳಿದಿವೆ ಇನ್ನೂ ಹಲವಾರು ಸಮಸ್ಯೆಗಳಿಂದ ಪರೆದಾಡುತ್ತಿದ್ದಾರೆ ಅಂತಹ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸ್ಥಳೀಯ ಮುಖಂಡರು ಬೇಸರ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು,ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
previous post
next post
