ಆಲೂರು ತಾಲೂಕು ಹಂಚೂರು ಪಂಚಾಯಿತಿ ವ್ಯಾಪ್ತಿಯ ಗಂಗರ ಗ್ರಾಮದ ರಘು ಎಂಬಾತ ರಸ್ತೆಯಲ್ಲಿದ್ದ ಗುಂಡಿಗೆ ಬೈಕ್ ನಲ್ಲಿ ಬಿದ್ದು ಮೃತಪಟ್ಟಿದ್ದು, ಇದರಿಂದ ಮನನೊಂದ ಗ್ರಾಮಸ್ಥರು ಮೃತದೇಹವನ್ನು ಅಲ್ಲಿಯೇ ಇಟ್ಟು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದರು.
ಈ ಹಿಂದೆ ರಘು ರವರ ಪತ್ನಿಯೂ ಮೃತಪಟ್ಟಿದ್ದು ದಂಪತಿಯ ಇಬ್ಬರು ಮಕ್ಕಳು ತಂದೆ ತಾಯಿಯನ್ನು ಕಳೆದುಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಭೇಟಿ ನೀಡಿ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಸಂಭಂದ ಪಟ್ಟ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಿ ನಂತರ ಗ್ರಾಮಸ್ಥರ ಮನವೊಲಿಸಿ ಪ್ರತಿಭಟನೆಯನ್ನು ನಿಲ್ಲಿಸುವಂತೆ ಮನವಿ ಮಾಡಿ ಸೂಕ್ತ ಪರಿಹಾರದ ಭರವಸೆ ನೀಡಿದರು.


