ಸಕಲೇಶಪುರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಮುಖಂಡರು ಮತ್ತು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಮುರಳಿ ಮೋಹನ್ ರವರ ಮತ್ತು ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಡಳಿತ, ಅಭಿವೃದ್ಧಿ ಕೆಲಸ ಕಾರ್ಯಗಳು ವ್ಯಕ್ತಿತ್ವವನ್ನು ಮೆಚ್ಚಿ ವಳಲ ಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯುವಕ ಮಿತ್ರರು ವಿವಿಧ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಪಕ್ಷದ ನಿಷ್ಠೆ ಪ್ರಾಮಾಣಿಕತೆಯನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ವಳಲ ಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಮಾಜಿ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರಾದಂತಹ ಕರಡಿಗಾಲ ಕೃಷ್ಣೇಗೌಡರ ನೇತೃತ್ವದಲ್ಲಿ ಯುವಕರ ತಂಡ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದು ಈ ಸಂದರ್ಭದಲ್ಲಿ ಕಟ್ಟಾಯ ಹೋಬಳಿಯ ಕಾಂಗ್ರೆಸ್ ಮುಖಂಡರಾದಂತ ಕೃಷ್ಣರವರು ಕಾಂಗ್ರೆಸ್ ಮುಖಂಡರು ಮತ್ತು ಗ್ರಾಮ ಪಂಚಾಯತಿ ಸದಸ್ಯರಾದಂತಹ ಬೈಕೆರೆ ದೇವರಾಜ್ ರವರು ಉಪಸ್ಥಿತರಿದ್ದರು
