ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ APMC ಬಳಿ ಅಸ್ಸಾಂ ಮೂಲದ ಕಾರ್ಮಿಕರಾದ ಅಮ್ಜದ್ ಅಲಿ ಮತ್ತು ಇದ್ರೀಸ್ ಅಲಿ ( ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಹೋಬಳಿಯ ಬೆಟ್ಟದಮನೆಯ ಎಸ್ಟೇಟ್ ಒಂದರಲ್ಲಿ ಕೆಲಸ) ಇವರುಗಳು ಸುಮಾರು 500 ಗ್ರಾಂ(ಅರ್ಧ ಕೆ.ಜಿ) ಗಾಂಜಾ ಸೊಪ್ಪನ್ನು ಮಾರಾಟಮಾಡುತ್ತಿದ್ದರು.
ಆ ಸಮಯದಲ್ಲಿ ಇವರುಗಳನ್ನು ದಸ್ತಗಿರಿಮಾಡಿದ ಪೊಲೀಸರು ಠಾಣೆಗೆ ಕರೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.ನಂತರ ನ್ಯಾಯಾಲಯಕ್ಕೆ ಹಾಜರಿಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ಸಕಲೇಶಪುರ ಡಿವೈಎಸ್ಪಿ ಮಾಲತೇಶ್ ಎಸ್.ಕೆ.ರವರ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವಿ.ಸಿ.ವನರಾಜು,ಸಬ್ ಇನ್ಸ್ ಪೆಕ್ಟರ್ ಮಹೇಶ್ ಜೆ.ಈ,ಹಾಗೂ ಸಿಬ್ಬಂದಿಗಳಾದ ಪೃಥ್ವಿ,ರೇವಣ್ಣ,ಶ್ರೀಧರ್,ಸೋಮಶೇಖರ್, ಚಂದ್ರಕಾಂತ್,ಮಧು ಮುಂತಾದವರು ಶ್ರಮಿಸಿರುತ್ತಾರೆ.
