ಸಕಲೇಶಪುರದ ಜಮ್ಮನ ಹಳ್ಳಿಯಿಂದ ಬಾಳ್ಳುಪೇಟೆವರೆಗಿನ ರಸ್ತೆ ಸಂಪೂರ್ಣ ಹದ ಗೆಟ್ಟಿದೆ.
ಯಾವ ಮಟ್ಟಕ್ಕೆ ಹದಗೆಟ್ಟಿದೆ ಎಂದರೆ ಈ ರಸ್ತೆಯಲ್ಲಿ ಸಂಚಾರ ಮಾಡಲು ಕೂಡಾ ಸಮಸ್ಯೆ ಉಂಟಾಗಿದೆ.
ಈಗಾಗಲೇ ಹಲವಾರು ಬೈಕ್ ಸವಾರರು ಈ ರಸ್ತೆಯಲ್ಲಿ ಸಂಚಾರ ಮಾಡುವ ಸಂದರ್ಭದಲ್ಲಿ ಕೆಳಕ್ಕೆ ಉರುಳಿ ಗಾಯಗೊಂಡ ಘಟನೆ ಕೂಡಾ ನಡೆದಿದೆ.
ಮಳೆಗಾಲ ಆರಂಭ ಆಗುವ ಮೊದಲಿನ ಮೇ ತಿಂಗಳಲ್ಲಿ ಈ ರಸ್ತೆಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಗುದ್ದಲಿ ಪೂಜೆ ಕೂಡಾ ಮಾಡಲಾಗಿತ್ತು.
ಅದರ ನಂತರ ಕಾಮಗಾರಿ ಮಾಡಲು ರಸ್ತೆ ಅಗೆಯಲಾಗಿತ್ತು. ಆದರೆ ಮಳೆಗಾಲ ಆರಂಭ ಆದಾಗ ಈ ರಸ್ತೆ ಕೆಸರು ತುಂಬಿದ ರಸ್ತೆಯಾಗಿ, ಬಿಸಿಲು ಬಂದಾಗ ಧೂಳು ತುಂಬಿದ ರಸ್ತೆಯಾಗಿ ಎಲ್ಲರಿಗೂ ತೊಂದರೆ ಆಗುತ್ತಿದೆ.
ಈ ರಸ್ತೆಯ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರುವಲ್ಲಿ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಶ್ರಮ ಪಡಬೇಕು.
ಜನರಿಗೆ ನಿರಂತರ ಈ ರಸ್ತೆ ದುರವಸ್ಥೆಯಿಂದಾಗಿ ಸಮಸ್ಯೆ ಆಗುತ್ತಲೇ ಇದೆ. ಈ ಬಗ್ಗೆ ಗಮನ ಹರಿಸುವಂತೆ ಸ್ಥಳೀಯರು ತಿಳಿಸಿದ್ದಾರೆ

