ತಿಂಗಳಗಟ್ಟಲೆ ಚರಂಡಿ ನೀರು ನಿಂತಲ್ಲಿಯೇ ನಿಂತು ಕೆಟ್ಟ ವಾಸನೆಯಿಂದ ಸಾರ್ವಜನಿಕರಿಗೆ ಅನಾನುಕೂಲ. ಪುರಸಭೆ ಅಧಿಕಾರಿಗಳು ಇದರತ್ತ ಗಮನಹರಿಸಿ :- ಕರವೇ ( ಪ್ರವೀಣ್ ಶೆಟ್ಟಿ ಬಣ )
ಸಕಲೇಶಪುರದ ವಾರ್ಡ್ ನಂಬರ್ 20 ನೇ ಮಲ್ಲಮ್ಮನ ಬೀದಿಯಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ಕೊಳಚೆ ನೀರು ನಿಂತಲ್ಲಿಯೆ ನಿಂತು ದುರ್ವಾಸನೆ ಬೀರುತ್ತಿದೆ. ಇದರಿಂದ ಸಾರ್ವಜನಿಕರು ಈ ರಸ್ತೆಯಲ್ಲಿ ಮೂಗು ಮುಚ್ಚಿಕೊಂಡು ತಿರುಗಾಡುವ ಪರಿಸ್ಥಿತಿ ಎದುರಾಗಿದೆ. ಅಲ್ಲದೆ ಸೊಳ್ಳೆಗಳು ಹೆಚ್ಚಾಗುತ್ತಿವೆ.
ಕೂಡಲೇ ಪುರಸಭೆ ಅಧಿಕಾರಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಚರಂಡಿಯಲ್ಲಿ ನಿಂತಿರುವ ಕೊಳಚೆ ನೀರು ಸರಾಗವಾಗಿ ಚಲಿಸುವಂತೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಕಾರ್ಯದರ್ಶಿ ಪುರುಷೋತ್ತಮ್ ಆಗ್ರಹಿಸಿದ್ದಾರೆ.

