ಆಲೂರು: ಪಟ್ಟಣದ ಹೃದಯ ಭಾಗದಲ್ಲಿ ಇಂದು ಮಧ್ಯಾಹ್ನ ಬಿಹಾರ ರಾಜ್ಯದ ಫಲಿತಾಂಶ ಪ್ರಕಟವಾದ ಹಿನ್ನಲೆ ಬಿಜೆಪಿ ಪಕ್ಷದ ವತಿಯಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ನಂತರ ಬಿಜೆಪಿ ಮಂಡಲ ಅಧ್ಯಕ್ಷರಾದ ಉಮಾ ರವಿಪ್ರಕಾಶ್ ಅವರು ಮಾತನಾಡಿ ಬಿಹಾರದ ಪ್ರತಿಯೊಬ್ಬ ಮತದಾರರಿಗೂ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇವೆ,ಬಿಹಾರದ ಜನರು ಜಂಗಲ್ ರಾಜ್,ಭ್ರಷ್ಟಾಚಾರ ಮತ್ತು ಅರಾಜಕತೆಯನ್ನು ಬಯಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಆಧಾರದ ಮೇಲೆ ಜನರು ಮತ ಹಾಕಿದ್ದಾರೆ.ಯುವಕರು,ಮಹಿಳೆಯರು,ರೈತರು ಮತ್ತು ಶಾಂತಿಯುತ ಹಾಗೂ ಅಭಿವೃದ್ಧಿ ಹೊಂದಿದ ಬಿಹಾರವನ್ನು ಬಯಸುವ ಎಲ್ಲರಿಗೂ ಈ ಗೆಲುವು ಸಿಕ್ಕಿದೆ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಬಿಜೆಪಿ ಮಂಡಲ ಕಾರ್ಯದರ್ಶಿಯಾದ ಕೃಷ್ಣಮೂರ್ತಿ.ಮುಖಂಡರಾದ ಗಣೇಶ್ ಭೈರಾಪುರ.ದೊರೆಗೌಡ ಹೊಸೂರು.ನಂಜುಡಪ್ಪ.ಕಿರಣ್.ಲಕ್ಷ್ಮಣ್.ನಾಗರಾಜ್.ಪಟೇಲ.ಲೊಕೇಶ್.ಗಜೇಂದ್ರ.ದೇವರಾಜ್.ಕರಿಯಯ್ಯ.ಶ್ರೀನಿವಾಸ್.ನಿತೀನ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
