ಸಕಲೇಶಪುರದ ಕಾಸ್ಮೋ ಪಾಲಿಟನ್ ಸ್ಪೋರ್ಟ್ಸ್ ಕ್ಲಬ್ ಹಾಲ್ ನಲ್ಲಿ ಮುಂಬರುವ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಸಕಲೇಶಪುರ ತಾಲ್ಲೂಕು ರೆಸಾರ್ಟ್ ಮತ್ತು ಹೋಂ ಸ್ಟೇ ಮಾಲಿಕರಿಗೆ ಅಬಕಾರಿ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಹಯೋಗದಲ್ಲಿ ಸಭೆಯನ್ನು ಏರ್ಪಡಿಸಿ ಕೆಲವು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಲಹೆ ಮತ್ತು ಸೂಚನೆ ನೀಡಲಾಯಿತು.
ಈ ಸಭೆಯಲ್ಲಿ ಹಾಸನ ಜಿಲ್ಲಾ ಅಬಕಾರಿ ಡಿ.ಸಿ.ಸುಮೀತಾ ಅಬಕಾರಿ ಇನ್ಸ್ ಪೆಕ್ಟರ್ ವೆಂಕಟೇಶ್, ಸಕಲೇಶಪುರ ನಗರ ಪೊಲೀಸ್ ಇನ್ಸ್ ಪೆಕ್ಟರ್ ವಿ.ಸಿ ವನರಾಜು,ಸಕಲೇಶಪುರ ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಬಸವನಗೌಡ.ಕೆ.ಪಾಟೀಲ್, ಹೋಂ ಸ್ಟೇ ಮತ್ತು ರೆಸಾರ್ಟ್ ಮಾಲೀಕರುಗಳ ಸಂಘದ ಮಸ್ತಾರೆ ಲೋಕೇಶ್, ಕೊರಡಿ ಕುಮಾರಸ್ವಾಮಿ, ಕಾಡುಮಕ್ಕಿ ಹರೀಶ್ ಮುಂತಾದವರು ಹಾಜರಿದ್ದರು.
