ದಿನಾಂಕ 26/12/2025 ರಂದು ಸಕಲೇಶಪುರ ಹೊಸ ಬಸ್ ನಿಲ್ದಾಣದ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಬಂದಿದ್ದ ಇಬ್ಬರು ಆರೋಪಿಗಳನ್ನು ಸಕಲೇಶಪುರ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಾದ ಜೋಯಲ್ ಬಿನ್ ಥಾಮಸ್ ಮ್ಯಾತ್ಯೋ ಕೇರಳ, ಸಫಾನ್ ಬಿನ್ ಅಬ್ದುಲ್ ಸತ್ತಾರ್ ಕೇರಳರಿಂದ 269 ಗ್ರಾಂ ಗಾಂಜಾ ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತಾರೆ.
ಈ ಆರೋಪಿಗಳು ಕೇರಳ ರಾಜ್ಯದವರಾಗಿದ್ದು ಬೆಂಗಳೂರಿನಲ್ಲಿ ನೆಲೆಸಿರುತ್ತಾರೆ.
ಈ ಕಾರ್ಯಾಚರಣೆ ಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ವನರಾಜು,ಸಬ್ ಇನ್ಸ್ ಪೆಕ್ಟರ್ ಮಹೇಶ್, ಸಿಬ್ಬಂದಿಗಳಾದ ಪೃಥ್ವಿ, ರೇವಣ್ಣ, ಶ್ರೀಧರ್,ಸೋಮಶೇಖರ್, ಚಂದ್ರಕಾಂತ್ ಮತ್ತು ಮಧು ರವರುಗಳು ಭಾಗವಹಿಸಿದ್ದರು.
previous post
next post
