ಸಕಲೇಶಪುದಲ್ಲಿ ಇಂದು ಸಚಿವ ಕೃಷ್ಣ ಬೈರೇ ಗೌಡ ರ ಅಧ್ಯಕ್ಷತೆಯಲ್ಲಿ ಜನ ಸ್ಪಂದನ ಕಾರ್ಯಕ್ರಮ ನಡೆಯಿತು.


ತಾಲೂಕು ಕಚೇರಿ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಂದಾಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಭೈರೇಗೌಡ ಮತ್ತು ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ಜಿಲ್ಲಾಧಿಕಾರಿ ಲತಾ ಕುಮಾರಿ ಭಾಗವಹಿಸಿ ಜನರ ಸಮಸ್ಯೆ ಪರಿಹಾರ ಮಾಡುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿ ಕೊಂಡರು.
ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಲಾಯಿತು.
ಈ ಕಾರ್ಯಕ್ರಮದಲ್ಲಿ 986 ಅರ್ಜಿಗಳು ಬಂದಿದ್ದು ಹಲವು ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ.
ಕಾರ್ಯಕ್ರಮದಲ್ಲಿ , ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
