ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಕೆ.ಎಂ ಶಿವಲಿಂಗೇಗೌಡರು ಅರಸೀಕೆರೆ ತಾಲೂಕಿನ ಚಿಕ್ಕಮ್ಮನಹಳ್ಳಿ ಗ್ರಾಮದ ಶ್ರೀ ಕಂಚೀವರದರಾಜ ಸ್ವಾಮಿಯವರ ನೂತನ ವಿಗ್ರಹ ಪ್ರತಿಷ್ಠಾಪನೆ ಹಾಗೂ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮ, ಧಾರ್ಮಿಕ ಸಮಾರಂಭ ಮತ್ತು ಸರ್ವ ಶರಣರ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಆಶೀರ್ವಾದ ಪಡೆದು ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನೀಲರಾಜ ನಾಯಕರು, ಗ್ರಾಮ ಪಂಚಾಯಿತಿ ಸದಸ್ಯರಾದ ರವೀಂದ್ರ ನಿತ್ಯ, ನಾಗರಾಜು
ಚಿಕ್ಕಮ್ಮನಹಳ್ಳಿ ಮುಖಂಡರಾದ ಶಶಿ ಮಂಜು ಹಾಗೂ ಕಾನುಬೆನಹಳ್ಳಿ ವಂಶಸ್ಥರು ಮತ್ತು ಉಪಸ್ಥಿತರಿದ್ದರು.





