Blog

ಕರಾಟೆ ಚಾಂಪಿಯನ್ ಶಿಪ್

ಹಾಸನ ಓಪನ್ ನ್ಯಾಷನಲ್ ಕರಾಟೆ ಚಾಂಪಿಯನ್‌ಶಿಪ್‌–2026 ಶುಕ್ರವಾರಸಂತೆಯ
ಶ್ರೀ ಮಂಜುನಾಥೇಶ್ವರ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ.:-

ಹಾಸನ: ಫೆಬ್ರವರಿ 7 ಮತ್ತು 8 ರಂದು ಹಾಸನದಲ್ಲಿ ನಡೆದ ಹಾಸನ ಓಪನ್ ನ್ಯಾಷನಲ್ ಕರಾಟೆ ಚಾಂಪಿಯನ್‌ಶಿಪ್‌–2026ರಲ್ಲಿ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಈ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶಾಲೆಯ ಒಟ್ಟು 16 ವಿದ್ಯಾರ್ಥಿಗಳು ಭಾಗವಹಿಸಿ, ಕಥಾ ಹಾಗೂ ಕುಮಿತೆ ವಿಭಾಗಗಳಲ್ಲಿ ಒಟ್ಟು 28 ಬಹುಮಾನಗಳನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಕಥಾ ವಿಭಾಗದಲ್ಲಿ ವಿದ್ಯಾರ್ಥಿಗಳು 4 ಪ್ರಥಮ, 4 ದ್ವಿತೀಯ ಹಾಗೂ 8 ತೃತೀಯ ಬಹುಮಾನಗಳನ್ನು ಗಳಿಸಿದರು.
ಕುಮಿತೆ ವಿಭಾಗದಲ್ಲಿ 3 ಪ್ರಥಮ, 2 ದ್ವಿತೀಯ ಹಾಗೂ 7 ತೃತೀಯ ಬಹುಮಾನಗಳನ್ನು ಪಡೆದು ಶ್ಲಾಘನೀಯ ಪ್ರದರ್ಶನ ನೀಡಿದರು.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಕರಾಟೆ ತರಬೇತುದಾರರು ಹಾಗೂ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ಕಠಿಣ ಅಭ್ಯಾಸ, ಶಿಸ್ತು ಹಾಗೂ ಮಾರ್ಗದರ್ಶನವೇ ಈ ಯಶಸ್ಸಿಗೆ ಕಾರಣ ಎಂದು ಅವರು ಅಭಿಪ್ರಾಯಪಟ್ಟರು.

ಈ ಸಾಧನೆಯೊಂದಿಗೆ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆ ಕ್ರೀಡಾ ಕ್ಷೇತ್ರದಲ್ಲಿಯೂ ತನ್ನ ಮೇಲುಗೈಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

Related posts

ಶ್ರೀಮತಿ ಪುಷ್ಪಾವತಿ ನಿಧನ

Bimba Prakashana

ನಾಡ ಪಟೇಲರ ಮನೆ ಧರಣೇoದ್ರ ಇನ್ನಿಲ್ಲ

Bimba Prakashana

ರಾಯರ ಕೊಪ್ಪಲು ಪಾನಿಪುರಿಯಲ್ಲಿ ಹುಳ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More