ಸಕಲೇಶಪುರದ ಮಾಜಿ ಶಾಸಕರಾದ ಹೆಚ್. ಎಮ್ ವಿಶ್ವನಾಥ್ ರವರು ನವ ದೆಹಲಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಮತ್ತು ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಯವರನ್ನು ಭೇಟಿ ಮಾಡಿದರು.
ಸಕಲೇಶಪುರ,ಆಲೂರು ಮತ್ತು ಬೇಲೂರು ತಾಲೂಕುಗಳಲ್ಲಿ ತೀವ್ರವಾಗಿರುವ ಕಾಡಾನೆ ಸಮಸ್ಯೆಗೆ ಶ್ರೀಲಂಕಾ ಮಾದರಿಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರಲ್ಲಿ ಮನವಿ ಮಾಡಿಕೊಂಡರು.
ಈ ವಿಚಾರದಲ್ಲಿ ಸ್ಪಂದಿಸಿದ ಹೆಚ್.ಡಿ ಕುಮಾರಸ್ವಾಮಿ ಯವರು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರನ್ನು ಕಾಡಾನೆ ಸಮಸ್ಯೆ ಇರುವ ಪ್ರದೆಶಗಳಿಗೆ ಕರೆದುಕೊಂಡು ಬಂದು ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.
