ಸಕಲೇಶಪುರ ಬಾಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಿನ್ನ ಸ್ವಾಮಿಯವರನ್ನು ಅರಕಲಗೂಡು ತಾಲೂಕಿನ ಹೆಬ್ಬಾಲೆ ಗ್ರಾಮ ಪಂಚಾಯತ್ ಗೆ ವರ್ಗಾವಣೆ ಮಾಡಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಗಳು ಆದೇಶ ನೀಡಿದ್ದಾರೆ.
ಚಿನ್ನ ಸ್ವಾಮಿಯವರ ಮೇಲೆ ಹಣ ದುರುಪಯೋಗ ಆರೋಪ ಇರುವ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡುವಂತೆ ಸಕಲೇಶಪುರ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿಗಳು ಹಾಸನ ಜಿಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮಾರ್ಚ್ 18 ರಂದು ಪತ್ರ ಬರೆದಿದ್ದರು.
ನಿನ್ನೆಯಿಂದ ಕರ್ನಾಟಕ ರಕ್ಷಣಾ ವೇದಿಕೆ ಕೂಡಾ ಸಕಲೇಶಪುರದಲ್ಲಿ ಅಹೋ ರಾತ್ರಿ ಪ್ರತಿಭಟನೆ ಹಮ್ಮಿ ಕೊಂಡಿತ್ತು.
ಈ ಹಿನ್ನೆಲೆಯಲ್ಲಿ ನಿನ್ನೆ ಚಿನ್ನ ಸ್ವಾಮಿಯವರನ್ನು ಹೆಬ್ಬಾಲೆ ಗೆ ವರ್ಗಾವಣೆ ಮಾಡಲಾಗಿದೆ
previous post
next post
