ಆಲೂರು ತಾಲೂಕು ಮಗ್ಗೆ ಗ್ರಾಮದ ನೀಲಾಭಾನು ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾ ಪಾರ್ಟಿ ಮಗ್ಗೆ ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಶಾಸಕ ಸಿಮೆಂಟ್ ಮಂಜುನಾಥ್ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಹಾಸನ ಬಿಜೆಪಿ ಜಿಲ್ಲಾಧ್ಯಕ್ಷರಾದ ಸಿದ್ದೇಶ್ ನಾಗೇಂದ್ರ , ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅಮಿತ್ ಶೆಟ್ಟಿ , ರಾಜ್ ಕುಮಾರ್ , ಆಲೂರು ತಾಲೂಕು ಅಧ್ಯಕ್ಷರಾದ ಶ್ರೀಮತಿ ಉಮಾ ರವಿಪ್ರಕಾಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಅಬ್ಬನ ಕೃಷ್ಣ , ಧೃವ ಕುಮಾರ್, ಮಗ್ಗೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ದಿನೇಶ್ ಅಡಿಬೈಲು, ಪ್ರಧಾನ ಕಾರ್ಯದರ್ಶಿ ಚೇತನ್ ರವರು, ಇನ್ನಿತರ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
