Blog

ಬೇಲೂರುನಲ್ಲಿ ವಾಲಿ ಬಾಲ್ ಪಂದ್ಯಾಟ

ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿದ ಪುರಸಭೆ ಅಧ್ಯಕ್ಷ ಆಕ್ರಂ ಷರೀಫ್

ಬೇಲೂರಿನ : ಜೂನಿಯರ್ ಕಾಲೇಜ್ ಮೈದಾನದಲ್ಲಿ ವೈ ಡಿ ಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಆಯೋಜಿಸಲಾದ ವಾಲಿಬಾಲ್ ಪಂದ್ಯಾವಳಿಯನ್ನು ಪುರಸಭೆ ಅಧ್ಯಕ್ಷ ಆಕ್ರಂ ಷರೀಫ್ ಉದ್ಘಾಟಿಸಿ ಆಟಗಾರರಿಗೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಕ್ರೀಡೆ ದೈಹಿಕ ಹಾಗೂ ಮಾನಸಿಕ ಶಕ್ತಿಯನ್ನು ವೃದ್ಧಿಸುವ ಉತ್ತಮ ಸಾಧನವಾಗಿದ್ದು, ಯುವಜನರಲ್ಲಿ ಆತ್ಮವಿಶ್ವಾಸ ಮತ್ತು ಏಕಾಗ್ರತೆಯನ್ನು ಬೆಳೆಸುತ್ತದೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ತೌಫೀಕ್ ಹಾಗೂ ಪುರಸಭಾ ಸದಸ್ಯ ಪ್ರಭಾಕರ್ ಉಪಸ್ಥಿತರಿದ್ದರು.

Related posts

ಅಂಬುಗ ಗ್ರಾಮದಲ್ಲಿ ಜಾತ್ರೆ

Bimba Prakashana

ಸಕಲೇಶಪುರ ಕೆಂಪು ಹೊಳೆ ಬಳಿ ಭೀಕರ ಅಪಘಾತ

Bimba Prakashana

ಮೀಸಲು ಕ್ಷೇತ್ರದಲ್ಲಿ ದಲಿತರಿಗೆ ರಕ್ಷಣೆ ಇಲ್ಲವೇ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More