ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿದ ಪುರಸಭೆ ಅಧ್ಯಕ್ಷ ಆಕ್ರಂ ಷರೀಫ್
ಬೇಲೂರಿನ : ಜೂನಿಯರ್ ಕಾಲೇಜ್ ಮೈದಾನದಲ್ಲಿ ವೈ ಡಿ ಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಆಯೋಜಿಸಲಾದ ವಾಲಿಬಾಲ್ ಪಂದ್ಯಾವಳಿಯನ್ನು ಪುರಸಭೆ ಅಧ್ಯಕ್ಷ ಆಕ್ರಂ ಷರೀಫ್ ಉದ್ಘಾಟಿಸಿ ಆಟಗಾರರಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಕ್ರೀಡೆ ದೈಹಿಕ ಹಾಗೂ ಮಾನಸಿಕ ಶಕ್ತಿಯನ್ನು ವೃದ್ಧಿಸುವ ಉತ್ತಮ ಸಾಧನವಾಗಿದ್ದು, ಯುವಜನರಲ್ಲಿ ಆತ್ಮವಿಶ್ವಾಸ ಮತ್ತು ಏಕಾಗ್ರತೆಯನ್ನು ಬೆಳೆಸುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ತೌಫೀಕ್ ಹಾಗೂ ಪುರಸಭಾ ಸದಸ್ಯ ಪ್ರಭಾಕರ್ ಉಪಸ್ಥಿತರಿದ್ದರು.
