ಆಲೂರು: ತಾಲ್ಲೂಕಿನ ಕೆ.ಹೊಸಕೋಟೆ ಹೋಬಳಿ ಮಾದೀಹಳ್ಳಿ ಗ್ರಾಮದ ನಿವೃತ್ತ ಸಿಆರ್ಪಿಎಫ್ ಯೋಧ ರಂಗಸ್ವಾಮಿ (52) ನಿನ್ನೆ ಶುಕ್ರವಾರ ನಿಧನರಾಗಿದ್ದಾರೆ.
ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರಿಗೆ ಪತ್ನಿ ಹಾಗು ಇಬ್ಬರು ಮಕ್ಕಳಿದ್ದಾರೆ. ಕುಂದೂರು ಹೋಬಳಿ ಮನಿಗನಹಳ್ಳಿ ಗ್ರಾಮದಲ್ಲಿ ಇಂದು ಶನಿವಾರ ಅಂತ್ಯಕ್ರಿಯೆ ನೆರವೇರಲಿದೆ.
previous post
next post
