ಸಕಲೇಶಪುರ: ನಗರದಲ್ಲಿ ಅ.ಕ್ರ.ಮವಾಗಿ ಮಾ*ದ*ಕ ವಸ್ತುವನ್ನು ಕಾರಿನಲ್ಲಿಟ್ಟುಕೊಂಡು ಮಾ.ರಾ.ಟ ಮಾಡಲು ಯತ್ನಿಸುತ್ತಿದ್ದ ಕೊಡಗು ಮೂಲದ ವ್ಯಕ್ತಿಯೊಬ್ಬನನ್ನು ಸಕಲೇಶಪುರ ನಗರ ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ ಸುಮಾರು ₹2.5 ಲಕ್ಷ ಮೌಲ್ಯದ 25 ಗ್ರಾಂ ಎ*ಡಿಎ*ಎ (MDM@) ಮಾ*ದ*ಕ ವಸ್ತುವನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಘಟನೆಯ ವಿವರ:
ದಿನಾಂಕ 05/08/2026 ರಂದು ಮಧ್ಯಾಹ್ನ ಸುಮಾರು 02.15 ಗಂಟೆಯ ವೇಳೆಗೆ, ಸಕಲೇಶಪುರ ಟೌನ್ನ ಗುರುದೇವ ಪೆಟ್ರೋಲ್ ಬಂಕ್ ಬಳಿ ಇರುವ ನಾಗ್ ಎನ್ಕ್ಲೇವ್ ಲೇಔಟ್ ಪ್ರದೇಶದಲ್ಲಿ ಕಾರಿನಲ್ಲಿ ವ್ಯಕ್ತಿಯೊಬ್ಬ ಮಾ*ದ*ಕ ಪದಾರ್ಥ ಮಾ.ರಾ.ಟ ಮಾಡುತ್ತಿರುವ ಬಗ್ಗೆ ಸಕಲೇಶಪುರ ನಗರ ಪೊಲೀಸ್ ಠಾಣೆಯ ಅಪರಾ🚫ಧ ವಿಭಾಗದ ಸಬ್ ಇನ್ಸ್ಪೆಕ್ಟರ್ ಕೃಷ್ಣಪ್ಪ ಕೆ.ಎಸ್. ಅವರಿಗೆ ಖಚಿತ ಮಾಹಿತಿ ಲಭಿಸಿತ್ತು.
ಮಾಹಿತಿ ಆಧಾರದ ಮೇಲೆ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರ ತಂಡ, ಸ್ಥಳದ ಮೇಲೆ ಹಠಾತ್ ದಾ*ಳಿ ನಡೆಸಿ ಕೊಡಗು ಮೂಲದ ಅಜರುದ್ದೀನ್ ಎಂಬಾತನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಪರಿಶೀಲನೆ ನಡೆಸಿದಾಗ ಆತನ ಬಳಿ ಇದ್ದ 25 ಗ್ರಾಂ ತೂಕದ ಎ*ಡಿಎ*ಎ ಪತ್ತೆಯಾಗಿದೆ.
ಪ್ರಕರಣ ದಾಖಲು & ನ್ಯಾಯಾಂಗ ಬಂಧನ:
ಬಂಧಿತ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಪೊಲೀಸ್ ತಂಡದ ಯಶಸ್ವಿ ಕಾರ್ಯಾಚರಣೆ:
ಸಕಲೇಶಪುರ ನಗರ ಪೊಲೀಸ್ ಇನ್ಸ್ಪೆಕ್ಟರ್ ವನರಾಜು ಅವರ ಮಾರ್ಗದರ್ಶನದಲ್ಲಿ, ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ಕೃಷ್ಣಪ್ಪ ಕೆ.ಎಸ್. ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಠಾಣೆಯ ಸಿಬ್ಬಂದಿಗಳಾದ ಖಾದರ್ ಅಲಿ, ರೇವಣ್ಣ ಎಸ್.ಜೆ., ಶ್ರೀಧರ್, ರಾಕೇಶ್, ಸೋಮಶೇಖರ್, ಅಶೋಕ್, ಸುನಿಲ್ ಕುಮಾರ್, ಹನುಮಂತು, ಶಿವಕುಮಾರ್ ಹಾಗೂ ಚಾಲಕ ಮಧು ಭಾಗವಹಿಸಿದ್ದರು.
