ಸಿದ್ದಾಪುರ ಶಾಲಾ ಶಿಕ್ಷಕ ದೊರೇಶ ಎಂ.ಎಸ್. ಅವರಿಗೆ ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆ
ಸಕಲೇಶಪುರ: ತಾಲೂಕಿನ ಸಿದ್ದಾಪುರ ಸರ್ಕಾರಿ ಶಾಲೆಯ ಶಿಕ್ಷಕರಾಗಿರುವ ಹಾಗೂ ಹಾಲಿ ಸರ್ಕಾರಿ ನೌಕರರ ಸಂಘದ ಖಜಾಂಚಿಯಾಗಿರುವ ದೊರೇಶ ಎಂ.ಎಸ್. ಅವರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್ ನುಗ್ಲಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ಕೊಡಗು ಅವರು ಪ್ರಕಟಣೆಯಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ.
ದೊರೇಶ ಎಂ.ಎಸ್. ಅವರ ನೇಮಕಕ್ಕೆ ಶಿಕ್ಷಕರು ಹಾಗೂ ಸರ್ಕಾರಿ ನೌಕರರ ವಲಯದಲ್ಲಿ ಅಭಿನಂದನೆಗಳು ವ್ಯಕ್ತವಾಗಿವೆ.
previous post
next post
