ಆಲೂರು: ಸಾರ್ವಜನಿಕರು ತಮ್ಮ ಸಮಸ್ಯೆಗಳ – ಪರಿಹಾರಕ್ಕಾಗಿ ಹಾಸನಕ್ಕೆ ತೆರಳುವುದರಿಂದ ಹೆಚ್ಚಿನ ಸಮಯ ಹಾಗೂ ಹಣ ವ್ಯಯವಾಗುವುದನ್ನು ಮನಗಂಡು, ಆಲೂರಿನಲ್ಲಿ ಪ್ರತಿ ಮಂಗಳವಾರ ಉಪ ವಿಭಾಗಾಧಿಕಾರಿ ನ್ಯಾಯಾಲಯ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಉಪ ಈ ವಿಭಾಗಾಧಿಕಾರಿ ಹುಮನಿ ಇಮ್ಮ ತಿಳಿಸಿದ್ದಾರೆ.
ಪಟ್ಟಣದ ಮಿನಿ ವಿಧಾನಸೌಧದಲ್ಲಿ ಉಪ ವಿಭಾಗಾಧಿಕಾರಿ ನ್ಯಾಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಹಣಿ, ಕಂದಾಯ ಸೇರಿದಂತೆ ವಿವಿಧ ಕಂದಾಯ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕಾಗಿ ಸಾರ್ವಜನಿಕರು ದೂರದ ಹಾಸನಕ್ಕೆ ತೆರಳಬೇಕಾಗುತ್ತಿತ್ತು. ಇದರಿಂದ ಜ್ಞ ಸಮಯ ಮತ್ತು ಹಣ ವ್ಯರ್ಥವಾಗುತ್ತಿತ್ತು. ಇದನ್ನು ಮನಗಂಡು ಸಾರ್ವಜನಿಕರ ಅನುಕೂಲಕ್ಕಾಗಿ ಆಲೂರಿನ ಮಿನಿ ವಿಧಾನಸೌಧದಲ್ಲಿಯೇ – ಪ್ರತಿ ಮಂಗಳವಾರ ಉಪ ವಿಭಾಗಾಧಿಕಾರಿ – ನ್ಯಾಯಾಲಯ ನಡೆಸಲಾಗುವುದು ಎಂದು – ತಿಳಿಸಿದರು.
ಉಪ ವಿಭಾಗಾಧಿಕಾರಿ ನ್ಯಾಯಾಲಯ – ಆಲೂರಿನಲ್ಲಿಯೇ ನಡೆಯುವುದರಿಂದ ಈ ತಾಲೂಕಿನ ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ತಮ್ಮ ಕಂದಾಯ ಸಂಬಂಧಿತ ಸಮಸ್ಯೆಗಳಿಗೆ ಅಗತ್ಯ ದಾಖಲೆಗಳೊಂದಿಗೆ ನ್ಯಾಯಾಲಯಕ್ಕೆ ಹಾಜರಾಗಿ – ಪರಿಹಾರ ಪಡೆದುಕೊಳ್ಳುವಂತೆ ಅವರು ತಿಳಿಸಿದರು.
ವಾರಕ್ಕೊಮ್ಮೆ ತಾಲೂಕು ಕಚೇರಿಯಲ್ಲಿ ಉಪ ವಿಭಾಗಾಧಿಕಾರಿ ನ್ಯಾಯಾಲಯ ನಡೆಯುವುದ-ರಿಂದ ಸಾರ್ವಜನಿಕರು ದೂರದ ಹಾಸನಕ್ಕೆ ತೆರಳುವ ಅಗತ್ಯ ಕಡಿಮೆಯಾಗಲಿದೆ. ಇದ-ರಿಂದ ಸಾರ್ವಜನಿಕರಿಗೆ ಸಮಯ ಹಾಗೂ ಹಣದ ಉಳಿತಾಯವಾಗಲಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಸಕಲೇಶಪುರ ಉಪ ವಿಭಾಗಾಧಿಕಾರಿ, ಆಲೂರು ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಎಲ್. ಮಹೇಶ್ ಸೇರಿದಂತೆ ಅಧಿಕಾರಿಗಳು, ವಕೀಲರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
previous post
