ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನದಲ್ಲಿ ರಕ್ಷಾಬಂಧನ ಆಚರಣೆ
ಶುಕ್ರವಾರಸಂತೆ: ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ ರಕ್ಷಾಬಂಧನ ದಿನವನ್ನು ಸಡಗರದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು ಪರಸ್ಪರ ರಾಖಿ ಕಟ್ಟುವ ಮೂಲಕ ಸಹೋದರತ್ವ, ಪ್ರೀತಿ ಹಾಗೂ ಪರಸ್ಪರ ರಕ್ಷಣೆಯ ಸಂದೇಶ ಸಾರಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಭಾಸ್ಕರ್ ಮಾತನಾಡಿ, ರಕ್ಷಾಬಂಧನ ಹಬ್ಬದ ಮಹತ್ವ ಹಾಗೂ ಸಹೋದರತ್ವದ ಬಂಧದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಪರಸ್ಪರ ಗೌರವ, ಪ್ರೀತಿ ಹಾಗೂ ಸಹಕಾರದ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ವೈ.ಜೆ. ಯೋಗೇಶ್, ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



