Blog

ಕದಾಳು ಗ್ರಾಮದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ

🔴ಆಲೂರು ತಾಲೂಕಿನ ಕದಾಳು ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರಲ್ಲಿ ನಿರಾಳತೆ

ಆಲೂರು.ಕಳೆದೊಂದು ತಿಂಗಳಿಂದ ಗ್ರಾಮದೊಳಗೆ ಆಗಾಗ್ಗೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿರುವ ಘಟನೆ ತಾಲೂಕಿನ ಕದಾಳು ಗ್ರಾಮದಲ್ಲಿ ನಡೆದಿದೆ.

ಒಂದು ತಿಂಗಳಿಂದ ಕದಾಳು ಗ್ರಾಮದ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿತ್ತು. ರಾತ್ರಿ ಗ್ರಾಮದೊಳಗೆ ನುಗ್ಗುತ್ತಿದ್ದ ಚಿರತೆ ಕುರಿ ಹಾಗೂ ನಾಯಿಗಳನ್ನು ತಿಂದು ಹಾಕುತ್ತಿತ್ತು. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದರು.

ಗ್ರಾಮದ ರಘು ಎಂಬುವರ ಮನೆಯ ಆವರಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿಯೂ ಚಿರತೆ ಓಡಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಈ ಹಿನ್ನೆಲೆಯಲ್ಲಿ ಚಿರತೆಯನ್ನು ಸೆರೆ ಹಿಡಿದು ಗ್ರಾಮಸ್ಥರಿಗೆ ರಕ್ಷಣೆ ಒದಗಿಸುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದರು.

ಕದಾಳು ಗ್ರಾಮದ ಹಿರಿಯ ಮುಖಂಡ ಲೋಕೇಶ್ ಮಾತನಾಡಿ ಕಳೆದ ಎರಡು ವರ್ಷಗಳಿಂದ ನಮ್ಮ ಊರಿನಲ್ಲಿ ಚಿರತೆಯ ಚಲನವಲನ ಕಂಡುಬರುತ್ತಿತ್ತು ನಾವು ಅರಣ್ಯ ಇಲಾಖೆಗೆ ಕರೆ ಮಾಡಿ ಚಿರತೆಯನ್ನು ಹಿಡಿಯಲು ಮನವಿ ಸಲ್ಲಿಸಿದ್ದೆವು ಇದಕ್ಕೆ ಸ್ಪಂದಿಸಿದ ಅರಣ್ಯ ಇಲಾಖೆ ಚಿರತೆ ಹಿಡಿಯಲು ಬೋನನ್ನು ಅಳವಡಿಸಿದ್ದರು. ಚಿರತೆ ಬೋನಿಗೆ ಬಿದ್ದಿದ್ದು  ತುಂಬಾ ಸಂತೋಷಕರ ವಿಚಾರವಾಗಿದೆ ಎಂದು ಮಾತನಾಡಿದಲ್ಲದೆ ನಮ್ಮ ಗ್ರಾಮದಲ್ಲಿ ನೆಮ್ಮದಿಯಿಂದ ಓಡಾಡಲು ಅವಕಾಶ ಮಾಡಿರುವ ಅರಣ್ಯ ಇಲಾಖೆಗೆ ಧನ್ಯವಾದಗಳು ಎಂದು ಮಾತನಾಡಿದರು

ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಶುಕ್ರವಾರ ಗ್ರಾಮದಲ್ಲಿ ಬೋನು ಇರಿಸಿದ್ದರು. ಶನಿವಾರ ಬೆಳಗಿನ ಜಾವ ಅಂದಾಜು ಮೂರು ವರ್ಷದ ಹೆಣ್ಣು ಚಿರತೆ ಬೋನಿಗೆ ಬಿದ್ದಿದೆ. ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಚಿರತೆಯನ್ನು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರಿಸಲಾಯಿತು. ಚಿರತೆ ಸೆರೆಯಾಗಿರುವ ಸುದ್ದಿ ತಿಳಿದು ಕದಾಳು ಗಾಮಸರು ನೆಮದಿಯ ನಿಟುಸಿರು ಬಿಟಿದ್ದಾರೆ.

Related posts

ಆಲೂರುನಲ್ಲಿ ರೈಲ್ವೆ ನಿಲುಗಡೆ – ಶಾಸಕರ, ಜನಪ್ರತಿನಿಧಿಗಳ ಶೂನ್ಯ ಪ್ರಯತ್ನ

Bimba Prakashana

🔴ಬೇಕಾಗಿದ್ದಾರೆ

Bimba Prakashana

🔴ಕರ್ನಾಟಕ ಪಬ್ಲಿಕ್ ಶಾಲೆ ಹೆತ್ತೂರಿನಲ್ಲಿ ಮಕ್ಕಳಿಗೆ ಅಕ್ಷರ ಅಭ್ಯಾಸ ಕಾರ್ಯಕ್ರಮ.

🔴ಪೋಷಕರಿಂದ ಉತ್ತಮ ಪ್ರತಿಕ್ರಿಯೆ – ಶಿಕ್ಷಣದ ಮೊದಲ ಹೆಜ್ಜೆಗೆ ಶುಭಾರಂಭ.

ಸಕಲೇಶಪುರ :-  ಕರ್ನಾಟಕ ಪಬ್ಲಿಕ್ ಶಾಲೆ ಹೆತ್ತೂರು ಪೂರ್ವ ಪ್ರಾಥಮಿಕ ವಿಭಾಗದ ಎಲ್‌ಕೆಜಿ ತರಗತಿಗೆ ಹೊಸದಾಗಿ ಸೇರ್ಪಡೆಯಾದ ಮಕ್ಕಳಿಗೆ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಶಿಕ್ಷಕ ವೃಂದದವರ ವತಿಯಿಂದ ಅಕ್ಷರ ಅಭ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಪೋಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹಿರಿಯ ಅರ್ಚಕರಾದ ಶ್ರೀಯುತ ಮೂರ್ತಿ ಅವರು ಮಕ್ಕಳಿಗೆ ಅಕ್ಷರ ಅಭ್ಯಾಸ ಕಾರ್ಯಕ್ರಮವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ಮಂಜುನಾಥ್ ಅವರು ಮಾತನಾಡಿ, ಅಕ್ಷರ ಅಭ್ಯಾಸ ಕಾರ್ಯಕ್ರಮವು ಮಕ್ಕಳಲ್ಲಿ ಹೊಸ ಚೈತನ್ಯ ಹಾಗೂ ಉತ್ಸಾಹ ತುಂಬಲಿ ಎಂದು ಹಾರೈಸಿದರು. ಶೃಂಗೇರಿ ಶ್ರೀ ಶಾರದಾ ಪೀಠದಲ್ಲಿ ನಡೆಯುವ ಸಂಪ್ರದಾಯದ ಕಾರ್ಯಕ್ರಮವನ್ನು ನಮ್ಮ ಶಾಲೆಯಲ್ಲಿ ಹಮ್ಮಿಕೊಂಡಿರುವುದು ಸಂತಸದ ವಿಷಯ ಎಂದರು.

ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕರಡಿಗಾಲ ಹರೀಶ್ ಅವರು ಮಾತನಾಡಿ, ಮಕ್ಕಳು ಮೊಬೈಲ್ ಬಳಕೆಯಿಂದ ದೂರವಿದ್ದು, ಓದು ಹಾಗೂ ಸೃಜನಾತ್ಮಕ ಚಟುವಟಿಕೆಗಳತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಪೋಷಕರಿಗೆ ಸಲಹೆ ನೀಡಿದರು.

ಶಾಲಾ ಶಿಕ್ಷಕಿ ಶ್ರೀಮತಿ ತೇಜಸ್ವಿನಿ ಅವರು ಮಕ್ಕಳ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಶಾಲೆಯಲ್ಲಿನ ಕಲಿಕಾ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಶಿಕ್ಷಕರಾದ ಮಹೇಶ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ,ಶಿಕ್ಷಕಿಯರಾದ ಸುನಂದಾ ,ರೂಪ ,ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More