ಸಮಾಜ ರಕ್ಷಣಾ ಸೇನೆಯ ಹಾಸನ ಜಿಲ್ಲಾಧ್ಯಕ್ಷರಾಗಿ ಪ್ರೀತಂ ವಿ.ಹೆಚ್. ಆಯ್ಕೆ
ಹಾಸನ: ಸಮಾಜ ರಕ್ಷಣಾ ಸೇನೆ (ರಿ.) ಸಂಘಟನೆಯ ಹಾಸನ ಜಿಲ್ಲಾ ನೂತನ ಅಧ್ಯಕ್ಷರಾಗಿ ಪ್ರೀತಂ ವಿ.ಹೆಚ್. ಅವರನ್ನು ಆಯ್ಕೆ ಮಾಡಲಾಗಿದೆ.
ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಹನುಮಂತರಾಜು ಕೆ.ಹೆಚ್. ಅವರು ಪ್ರೀತಂ ಅವರ ಸಂಘಟನಾ ಮನೋಭಾವ, ಸಾಮಾಜಿಕ ಕಾಳಜಿ ಹಾಗೂ ಕಾರ್ಯತತ್ಪರತೆಯನ್ನು ಪರಿಗಣಿಸಿ ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಿದರು. ಇದೇ ಸಂದರ್ಭದಲ್ಲಿ ಸಂಘಟನೆಯ ವಿವಿಧ ಪದಾಧಿಕಾರಿಗಳನ್ನೂ ನೇಮಕ ಮಾಡಲಾಯಿತು.
ನೂತನ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಹಾಸನ ಜಿಲ್ಲೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ, ಸಮಾಜದ ರಕ್ಷಣೆ ಹಾಗೂ ಜನಪರ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ವಿಶ್ವಾಸವನ್ನು ಸಂಘಟನೆಯ ಪದಾಧಿಕಾರಿಗಳು ವ್ಯಕ್ತಪಡಿಸಿದರು.
ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಪ್ರೀತಂ ವಿ.ಹೆಚ್. ಮಾತನಾಡಿ, “ಸಂಘದ ನಿಯಮಾನುಸಾರವಾಗಿ ಎಲ್ಲಾ ಪದಾಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಒಗ್ಗಟ್ಟಿನಿಂದ ಸಂಘಟನೆಯನ್ನು ಮುನ್ನಡೆಸುವುದರ ಜೊತೆಗೆ ಜಿಲ್ಲೆಯಲ್ಲಿ ಸಂಘಟನೆಯ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು” ಎಂದು ತಿಳಿಸಿದರು.


